ಬೆಳಗಾವಿ: ಕಬ್ಬು ಬೆಳೆಗಾರರಿಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಗುಡ್ ನ್ಯೂಸ್ ನೀಡಿದೆ. ಪ್ರತಿ ಟನ್ ಕಬ್ಬಿಗೆ 3350 ರೂಪಾಯಿ ನೀಡುವುದಾಗಿ ಘೋಷಿಸಿದೆ.
ನಿಪ್ಪಾಣಿ ತಾಲೂಕಿನ ಬೆಡಕಿಹಾಳ ಗ್ರಾಮದಲ್ಲಿರುವ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಸ್ವರೂಪ್ ಮಹಾದೇವರಾವ್ ಮಾಹಾಡಿಕ್ ಎಂಬುವವರ ಒಡೆತನದಲ್ಲಿದ್ದು, ಒಂದು ಟನ್ ಕಬ್ಬಿಗೆ ರಾಜ್ಯ ಸರ್ಕಾರ ನಿಗದಿ ಮಾಡಿದ ಬೆಲೆಗಿಂತಲೂ ಹೆಚ್ಚು ದರ ನೀಡುವುದಾಗಿ ತಿಳಿಸಿದೆ.
ಸರ್ಕಾರ ಟನ್ ಕಬ್ಬಿಗೆ 3300 ರೂಪಾಯಿ ನೀಡಲು ನಿರ್ಧರಿಸಿದೆ. ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಇನ್ನೂ 50 ರೂಪಾಯಿ ಹೆಚ್ಚಿಸಿ 3350 ರೂಪಾಯಿ ನೀಡುವುದಾಗಿ ತಿಳಿಸಿದೆ.
