ವಿಜಯಪುರ: ಬೈಕ್ ನಲ್ಲಿ ತೆರಳುತ್ತಿದ್ದವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ಅಜರುದ್ದೀನ್ ಅಬ್ದುಲ್ ರಜಾಕ್ ಮಕಾನದಾರ್ (38) ಕೊಲಾಯಾದ ವ್ಯಕ್ತಿ. ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರದ ನಿವಾಸಿ. ಕೆಲಸದ ನಿಮಿತ್ತ ವಿಜಯಪುರದ ಅಲಮೇಲ ಪಟ್ಟಣದಲ್ಲಿ ವಾಸವಾಗಿದ್ದರು.
ಬೈಕ್ ನಲ್ಲಿ ತೆರಳುತ್ತಿದ್ದಾಗ ಅಜರುದ್ದೀನ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲಮೇಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.