ಚೆನ್ನೈ: ನಟ ವಿಜಯ್ ಅವರ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕರೂರಿನಲ್ಲಿ ಸಂಭವಿಸಿದ್ದ ಭೀಕರ ಕಾಲ್ತುಳಿತ ದುರಂತದಲ್ಲಿ ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ನೂರಾರು ಜನರು ಗಾಯಗೊಂಡಿದ್ದಾರೆ.
ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿರುವವರ ಗುರುತು ಪತ್ತೆ ಹಚ್ಚಲಾಗುತ್ತಿದೆ. ಮೃತಪಟ್ಟಿರುವ 40 ಜನರಲ್ಲಿ 35 ಜನರ ಗುರುತು ಪತ್ತೆಯಾಗಿದೆ. ಈರೋಡ್, ತಿರುಪುರ, ಧಾರಾಪುರಂ ಜಿಲ್ಲೆಯ ತಲಾ ಇಬ್ಬರು ಮೃತಪಟ್ಟಿದ್ದಾರೆ. ಕರೂರು ಜಿಲ್ಲೆಯವರೇ ಆದ 28 ಜನರು ಸಾವನ್ನಪ್ಪಿದ್ದಾರೆ. ಹಾಗೂ ಸೇಲಂ ನ ಓರ್ವ ಸಾವನ್ನಪ್ಪಿದ್ದಾರೆ.
ಕಾಲ್ತುಳಿತದ ದುರಂತದಲ್ಲಿ ಮೃತಪಟ್ಟವರಲ್ಲಿ ಕರೂರು ಜಿಲ್ಲೆಯವರೇ ಹೆಚ್ಚಿದ್ದಾರೆ. ಉಳಿದವರ ಗುರುತು ಪತ್ತೆಕಾರ್ಯ ನಡೆಸಲಾಗುತ್ತಿದೆ.