BIG NEWS : ನಾಳೆ ಬೆಂಗಳೂರಿಗೆ ವಿಜಯ ರಾಘವೇಂದ್ರ ಪತ್ನಿ ‘ಸ್ಪಂದನಾ’ ಪಾರ್ಥಿವ ಶರೀರ ಆಗಮನ

ಬೆಂಗಳೂರು : ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದು ,  ಬ್ಯಾಂಕಾಕ್  ನಿಂದ  ನಾಳೆ ಬೆಂಗಳೂರಿಗೆ ಪಾರ್ಥಿವ ಶರೀರ ಆಗಮಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ಪಂದನಾ ಅವರ ಅಪ್ಪ ಮತ್ತು ಕುಟಂಬ ವರ್ಗದವರು ಅಲ್ಲೇ ಇದ್ದಾರೆ ಎನ್ನಲಾಗಿದೆ. ಇನ್ನೂ ಬೆಂಗಳೂರಿನಿಂದ ಬ್ಯಾಂಕಾಕ್ಗೆ ವಿಜಯ್ ರಾಘವೇಂದ್ರ ಅವರು ತೆರಳುತ್ತಿದ್ದಾರೆ ಎನ್ನಲಾಗಿದೆ.

ಬ್ಯಾಂಕಾಕ್ ಪ್ರವಾಸದಲ್ಲಿದ್ದ ಸ್ಪಂದನಾಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರುವ ಸಂಬಂಧ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

ನಿವೃತ್ತ ಎಸಿಪಿ ಬಿ.ಕೆ. ಶಿವರಾಂ ಪುತ್ರಿ ಸ್ಪಂದನಾರನ್ನು ವಿಜಯ್ ರಾಘವೇಂದ್ರ ಮದುವೆಯಾಗಿದ್ದರು. ಸಹಾಯಕ ಪೊಲೀಸ್ ಆಯುಕ್ತರಾದ ಬಿ.ಕೆ.ಶಿವರಾಂ ಅವರ ಪುತ್ರಿ ಸ್ಪಂದನಾ ಅವರನ್ನು ಅವರು 26 ಆಗಸ್ಟ್ 2007 ರಂದು ಪ್ರೀತಿಸಿ ಮದುವೆಯಾಗಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read