BIG NEWS: ಜಾತ್ರೆ ವೇಳೆ ದುರಂತ: ರಥದ ಗಾಲಿಗೆ ಸಿಲುಕಿ ಮತ್ತೋರ್ವ ಭಕ್ತ ಸಾವು

ವಿಜಯಪುರ: ಜಾತ್ರೆ ವೇಳೆ ದುರಂತ ಸಂಭವಿಸಿದ್ದು, ರಥದ ಗಾಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಮೂರಕ್ಕೇರಿಕೆಯಾಗಿದೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆಯಲ್ಲಿ ನೂಕುನುಗ್ಗಲು ಉಂಟಾಗಿ ರಥದ ಗಾಲಿಗೆ 7 ಜನರು ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳುಗಳಲ್ಲಿ ನಿನ್ನೆ ಅಭಿಷೇಕ್ ಮುಜಗೊಂಡ, ಸೋಬು ಶಿಂಧೆ ಎಂಬ ಇಬ್ಬರು ಮೃತಪಟ್ಟಿದ್ದರು.

ಇಂದು ಚಿಕಿತ್ಸೆ ಫಲಿಸದೇ ಸುರೇಶ್ ಕಟಕದೊಂದ(36) ಎಂಬುವವರು ಮೃತಪಟ್ಟಿದ್ದಾರೆ. ಇತರ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read