ದೆಹಲಿಯಿಂದ ಬಾಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬುಧವಾರ ರಾಷ್ಟ್ರ ರಾಜಧಾನಿಗೆ ಹಿಂತಿರುಗಲು ಸೂಚಿಸಲಾಯಿತು.
ವಿಮಾನ ನಿಲ್ದಾಣದ ಬಳಿ ಜ್ವಾಲಾಮುಖಿ ಸ್ಫೋಟ ಸಂಭವಿಸಿದೆ ಎಂಬ ವರದಿಗಳು ಬಂದಿದ್ದು, ಸುರಕ್ಷತೆಯ ದೃಷ್ಠಿಯಿಂದ ವಿಮಾನವು ದೆಹಲಿಯಲ್ಲಿ ಸುರಕ್ಷಿತವಾಗಿ ಇಳಿಯಿತು ಮತ್ತು ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.
ಜೂನ್ 18 ರಂದು ದೆಹಲಿಯಿಂದ ಬಾಲಿಗೆ ಏರ್ ಇಂಡಿಯಾ ವಿಮಾನ AI2145 ಪ್ರಯಾಣಿಸುತ್ತಿತ್ತು, ಆದರೆ ಬಾಲಿ ವಿಮಾನ ನಿಲ್ದಾಣದ ಬಳಿ ಜ್ವಾಲಾಮುಖಿ ಸ್ಫೋಟದ ವರದಿಗಳ ಕಾರಣ, ಸುರಕ್ಷತೆಯ ಹಿತದೃಷ್ಟಿಯಿಂದ ದೆಹಲಿಗೆ ಹಿಂತಿರುಗಲು ಸೂಚಿಸಲಾಯಿತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಪ್ರಯಾಣಿಕರಿಗೆ ಹೋಟೆಲ್ ವಸತಿ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ, ರದ್ದತಿ ಅಥವಾ ಉಚಿತ ಮರುಹೊಂದಿಸುವಿಕೆಯ ಸಂಪೂರ್ಣ ಹಣವನ್ನು ಪ್ರಯಾಣಿಕರಿಗೆ ಮರುಪಾವತಿಸಲಾಗಿದೆ ಎಂದು ತಿಳಿಸಿದೆ.
You Might Also Like
TAGGED:ಏರ್ ಇಂಡಿಯಾ