ವಕ್ಫ್ ವಿವಾದ: ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ವಕ್ಪ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದೆ.

ವಕ್ಪ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು, ವಿವಾದಕ್ಕೆ ಕಾರಣವಾದ ಸಚಿವ ಜಮೀರ್ ಅಹ್ಮದ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ, ಎಲ್ಲ ತಾಲೂಕುಗಳ ತಾಲೂಕು ಕಚೇರಿ ಎದುರು ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಸೇರಿ ಎಲ್ಲಾ ಕಾರ್ಯಕರ್ತರು, ಎಲ್ಲಾ ಹಂತದ ನಾಯಕರು ಭಾಗವಹಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read