ವಕ್ಫ್ ಮಂಡಳಿಗೆ ಮುಸ್ಲಿಮರ ವಿವಾಹ ನೋಂದಣಿ ಅಧಿಕಾರ: ಅರ್ಜಿಗೆ ಉತ್ತರಿಸಲು ವಿಳಂಬ ತೋರಿದ ಸರ್ಕಾರದ ವಿರುದ್ಧ ಹೈಕೋರ್ಟ್ ವಾಗ್ದಾಳಿ

ಬೆಂಗಳೂರು: ಮುಸ್ಲಿಮರ ವಿವಾಹ ನೋಂದಣಿ ಮತ್ತು ಮುಸ್ಲಿಂ ದಂಪತಿಗೆ ವಿವಾಹ ನೋಂದಣಿಯ ಪ್ರಮಾಣ ಪತ್ರ ವಿತರಿಸುವ ಅಧಿಕಾರ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ನೀಡಿರುವ ಸಂಬಂಧ ಆಕ್ಷೇಪಣೆ ಸಲ್ಲಿಸಲು ಮೀನಮೇಷ ಎಣಿಸುತ್ತಿರುವ ಸರ್ಕಾರದ ವಿರುದ್ಧ ಹೈಕೋರ್ಟ್ ವಾಗ್ದಾಳಿ ನಡೆಸಿದೆ.

ಅರ್ಜಿಗೆ ಉತ್ತರಿಸಲು ಕಾಲಹರಣ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಆಕ್ಷೇಪಣೆ ಸಲ್ಲಿಸಲು ಜೂನ್ 11ರ ಕೊನೆಯ ಗಡುವು ನೀಡಲಾಗಿದೆ.

ಮುಸ್ಲಿಂ ಸಮುದಾಯದ ವಿವಾಹಿತ ದಂಪತಿಗೆ ವಿವಾಹ ನೋಂದಣಿ ಮತ್ತು ವಿವಾಹ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ರಾಜ್ಯ ವಕ್ಫ್ ಮಂಡಳಿಗೆ ನೀಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹೊರಡಿಸಿದ ಆದೇಶ ಪ್ರಶ್ನಿಸಿ ಬೆಂಗಳೂರಿನ ಕೆ ಆಲಂ ಪಾಷಾ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಈ ವೇಳೆ ಸರ್ಕಾರಿ ವಕೀಲರು ಅರ್ಜಿಗೆ ಉತ್ತರ ನೀಡಲು ಮತ್ತೆ ಕಾಲಾವಕಾಶ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಈ ಹಿಂದೆ ಮೂರು ಬಾರಿ ಸಮಯ ಕೇಳಿದ್ದು, ಈಗ ಮತ್ತೆ ಸಮಯ ಕೇಳಲಾಗುತ್ತಿದೆ. ಕೊನೆಯ ಬಾರಿ ಅವಕಾಶ ನೀಡಲಾಗುವುದು. ಜೂನ್ 11ರೊಳಗೆ ಉತ್ತರ ನೀಡಬೇಕು. ಇಲ್ಲವಾದಲ್ಲಿ ನ್ಯಾಯಾಲಯ ತನ್ನದೇ ಆದ ತೀರ್ಮಾನ ಕೈಗೊಳ್ಳಲಿದೆ ಎಂದು ಹೈಕೋರ್ಟ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read