ಕಲುಷಿತ ನೀರು ಸೇವಿಸಿ ಇಬ್ಬರು ಸಾವು: 15 ಮಂದಿ ಆಸ್ಪತ್ರೆಗೆ ದಾಖಲು

ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಟಿ ತುಂಬಿಗೇರಿಯಲ್ಲಿ ಕಲುಷಿತ ನೀರು ಸೇವನೆಯಿಂದ ಇಬ್ಬರು ಮೃತಪಟ್ಟಿದ್ದಾರೆ.

ತುಂಬಿಗೇರಿಯ ಭೋವಿ ಸುರೇಶ(32) ಸೋಮವಾರ ಮೃತಪಟ್ಟಿದ್ದು, ಭೋವಿ ಮಹಾಂತೇಶ(35) ಅವರು ನಾಲ್ಕು ದಿನದ ಹಿಂದೆಗೆ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ವಾಂತಿ ಭೇದಿಯಿಂದಾಗಿ 15 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಲುಷಿತ ನೀರು ಸೇವನೆಯಿಂದ ಸಾವು ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಆದರೆ, ಆರೋಗ್ಯ ಅಧಿಕಾರಿಗಳು ಇದನ್ನು ದೃಢಪಡಿಸಿಲ್ಲ. ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನೀರಿನ ಪೈಪ್ ಒಡೆದು ಅದಕ್ಕೆ ಚರಂಡಿ ನೀರು ಸೇರಿ ನೀರು ಕಲುಷಿತಗೊಂಡಿದೆ. ಅದೇ ನೀರನ್ನು ಸೇವಿಸಿದ ಜನ ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ. ಅನೇಕರು ದಾವಣಗೆರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶುದ್ಧ ನೀರು ಪೂರೈಕೆ ಮಾಡಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read