ದಾರುಣ ಘಟನೆ: ನೀರು ತುಂಬಿಟ್ಟಿದ್ದ ಡ್ರಮ್ ಗೆ ಬಿದ್ದು ಮಗು ಸಾವು

ಹಾವೇರಿ: ನೀರು ತುಂಬಿಟ್ಟಿದ್ದ ಡ್ರಮ್ ಗೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಚಂದಾಪುರ ತಾಂಡಾದಲ್ಲಿ ನಡೆದಿದೆ.

ಯಲ್ಲಮ್ಮ ಶಂಕರ ಲಮಾಣಿ ದಂಪತಿಯ ಮಗು ಆದಿತ್ಯ ಲಮಾಣಿ(3) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಮಗುವನ್ನು ಬಿಟ್ಟು ಗದ್ದೆ ಕೆಲಸಕ್ಕೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಆಟವಾಡಿಕೊಂಡಿದ್ದ ಮಗು ಬಚ್ಚಲ ಮನೆಯಲ್ಲಿ ಇಟ್ಟಿದ್ದ ನೀರಿನ ಡ್ರಮ್ ಗೆ ಬಿದ್ದು ಮೃತಪಟ್ಟಿದೆ ಎಂದು ಹೇಳಲಾಗಿದೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read