ನೀರಿನ ಕಂದಾಯ ಪಾವತಿಸುವವರಿಗೆ ಗುಡ್ ನ್ಯೂಸ್: ಭಾನುವಾರವೂ ವಿಶೇಷ ಕೌಂಟರ್: ಬಾಕಿದಾರರ ಸಂಪರ್ಕ ಕಡಿತ

ಶಿವಮೊಗ್ಗ: 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಜ.5 ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ತರೆಯಲಾಗಿದೆ.

ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಗುಂಡಪ್ಪಶೆಡ್ ಪಾರ್ಕ್ ಹತ್ತಿರ, ಆರ್‌ಎಂಎಲ್ ನಗರ, ಭಾರತೀಯ ಸಭಾಭವನ, ವಿನೋಬನಗರ ಪೊಲೀಸ್ ಠಾಣೆ ಎದುರು ಪೊಲೀಸ್ ಚೌಕಿ, ಗಾಂಧಿನಗರ ಪಾರ್ಕ್ ಹತ್ತಿರ, ನೇತಾಜಿ ಸರ್ಕಲ್ ಆಟೋ ಸ್ಟ್ಯಾಂಡ್ ಹತ್ತಿರ ವಿಶೇಷ ವಸೂಲಾತಿ ಕೌಂಟರ್ ತೆರೆದಿದೆ.

ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read