Nandi Hills : ವೀಕೆಂಡ್ ಹಿನ್ನೆಲೆ ನಂದಿಬೆಟ್ಟಕ್ಕೆ ಹರಿದು ಬಂದ ಜನ ಸಾಗರ : ಟ್ರಾಫಿಕ್ ಜಾಮ್

ಬೆಂಗಳೂರು : ವೀಕೆಂಡ್ ಹಿನ್ನೆಲೆ ಇಂದು ನಂದಿಗಿರಿಧಾಮಕ್ಕೆ ಜನ ಸಾಗರವೇ ಹರಿದು ಬಂದಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.

ಚಿಕ್ಕಬಳ್ಳಾಪುರತಾಲೂಕಿನ ನಂದಿಬೆಟ್ಟಕ್ಕೆ ಹೋಗುವ ರಸ್ತೆಯಲ್ಲಿ ಫುಲ್ ಟ್ರಾಫಿಕ್ಜಾಮ್ ಉಂಟಾಗಿದ್ದು, 2-3ಕಿ.ಮೀ. ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರವಾಸಿಗರ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಸಂಚಾರದಟ್ಟಣೆಗೆ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಪ್ರವಾಸಿಗರು ಅಸಮಾಧಾನ ಹೊರ ಹಾಕಿದ್ದಾರೆ.
ಚಿಕ್ಕಬಳ್ಳಾಪುರ ಪಟ್ಟಣದಿಂದ ೧೦ ಕಿ.ಮಿ ದೂರದಲ್ಲಿ ಹಾಗು ಬೆಂಗಳೂರು ನಗರದಿಂದ ಸುಮಾರು ೪೫ ಕಿ.ಮಿ ದೂರದಲ್ಲಿರುವ ನಂದಿಬೆಟ್ಟ ಯಾವಾಗಲೂ ಪ್ರವಾಸಿಗರಿಂದ ತುಂಬಿ ತುಳುಕುತ್ತಿರುತ್ತದೆ.ವೀಕೆಂಡ್ ಹಿನ್ನೆಲೆ ಇಂದು ನಂದಿಗಿರಿಧಾಮಕ್ಕೆ ಜನ ಸಾಗರವೇ ಹರಿದು ಬಂದಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read