BIG NEWS : ಶಿವಮೊಗ್ಗದಲ್ಲಿ ಗಲಾಟೆ ನಡೆಯೋದು ಏನು ಹೊಸತಾ? : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಶಿವಮೊಗ್ಗದಲ್ಲಿ ಗಲಾಟೆ ನಡೆಯೋದು ಏನು ಹೊಸತಾ? ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದು, ಹಲವು ಟೀಕೆಗಳಿಗೆ ಕಾರಣವಾಗಿದೆ.

ಶಿವಮೊಗ್ಗ ಗಲಾಟೆ ಪ್ರಕರಣದ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಶಿವಮೊಗ್ಗದಲ್ಲಿ ಗಲಭೆ ಇದೇನು ಹೊಸತಲ್ಲ, ಈ ಹಿಂದೆಯೂ ಕೂಡ ನಡೆದಿದೆ. ಪೊಲೀಸರು ದೊಡ್ಡ ಪ್ರಮಾಣದ ಗಲಾಟೆ ತಪ್ಪಿಸಿದ್ದಾರೆ. ಶಿವಮೊಗ್ಗದ ಘಟನೆಗೆ ಕಾರಣ ಏನು ಎಂದು ಬಹಿರಂಪಡಿಸಲು ಸಾಧ್ಯವಿಲ್ಲ. ಶಿವಮೊಗ್ಗದಲ್ಲಿ ಕಲ್ಲು ತೂರಾಟ ಮಾಡಿದ್ದಾರೆ ಎಂಬ ಮಾಹಿತಿ ಇದೆ, ಕತ್ತಿ ಗುರಾಣಿ ಬಳಕೆ ಬಗ್ಗೆ ನನಗೆ ಗೊತ್ತಿಲ್ಲ ಎಂದರು.

ಶಿವಮೊಗ್ಗದಲ್ಲಿ ದೊಡ್ಡ ಪ್ರಮಾಣದ ಗಲಾಟೆ ಏನೂ ನಡೆದಿಲ್ಲ, ಪೊಲೀಸರು ಏನೂ ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಮಾಡಿದ್ದಾರೆ. ನಾವು ಮೊದಲೇ ಕಟ್ಟೆಚ್ಚರ ವಹಿಸಿದ್ದೆವು.  ಬಂಧಿತ  ಆರೋಪಿಗಳ ಹೆಸರು ಬಹಿರಂಗಪಡಿಸುವುದಕ್ಕೆ ಆಗಲ್ಲ .  ಯಾವ ಉದ್ದೇಶಕ್ಕೆ ಪೋಸ್ಟರ್, ಬ್ಯಾನರ್ ಹಾಕಿದ್ದಾರೆ ಎಂಬುದನ್ನು ತನಿಖೆ ಮಾಡುತ್ತೇವೆ ಎಂದರು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read