ಐದು ಹೆಸರು ಎಂದರೆ ವರ್ಗ ಏನಯ್ಯ ..? ಪುತ್ರನ ವೈರಲ್ ವೀಡಿಯೋಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು : ಐದು ಹೆಸರು ಎಂದರೆ ವರ್ಗ ಏನಯ್ಯ ..? ಎಂದು ಪುತ್ರ ಯತೀಂದ್ರನ ವೈರಲ್ ವೀಡಿಯೋಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿಡಿಯೋ ವೈರಲ್ ವಿಚಾರ ವ್ಯಾಪಕ ಚರ್ಚೆಯಾಗುತ್ತಿದೆ. ಈ ವಿಚಾರದ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.

ಈ ಹಿನ್ನೆಲೆ ಯತೀಂದ್ರನ ವೈರಲ್ ವೀಡಿಯೋಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಐದು ಹೆಸರು ಎಂದರೆ ವರ್ಗ ಏನಯ್ಯ? ಅದು ಸಿಎಸ್ಆರ್ ಲಿಸ್ಟ್ ಕಣಯ್ಯ..ಶಾಲೆ ಕಟ್ಟಡಗಳನ್ನು ಸಿಎಸ್ಆರ್ ಫಂಡ್ನಿಂದ ರಿಪೇರಿ ಮಾಡಿಸಲಾಲಾಗುತ್ತಿದೆ. ಈ ಬಗ್ಗೆ ಯತೀಂದ್ರ ಮಾತನಾಡಿದ್ದಾರೆ ಅಷ್ಟೇ..ಕುಮಾರಸ್ವಾಮಿ ರಾಜಕೀಯವಾಗಿ ಆರೋಪ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಮಟ್ಟದ ಹಗರಣ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಹೈದರಾಬಾದ್ ಹೋಗಿ ಹಣ ಹಾಕಿ ಬಂದಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read