ಪೊಲೀಸ್ ಅಧಿಕಾರಿ ಪುತ್ರನ ವ್ಹೀಲಿಂಗ್ ಹುಚ್ಚಾಟಕ್ಕೆ ವ್ಯಕ್ತಿ ಬಲಿ

ಮೈಸೂರು: ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಪುತ್ರನ ವ್ಹೀಲಿಂಗ್ ಹುಚ್ಚಾಟಕ್ಕೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.

ಹಿಮ್ಮಾವು ಗ್ರಾಮದ ಗುರುಸ್ವಾಮಿ(65) ಮೃತಪಟ್ಟವರು. ಗೋವಿಂದರಾಜು ಎಂಬುವರು ಗಾಯಗೊಂಡಿದ್ದಾರೆ. ಅವರನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಂಜನಗೂಡಿನ ಸಂಚಾರ ಠಾಣೆ ಪಿಎಸ್ಐ ಯಾಸ್ಮಿನ್ ತಾಜ್ ಅವರ ಪುತ್ರ ಸೈಯದ್ ಐಮಾನ್ ಹಾಗೂ ಆತನ ಸ್ನೇಹಿತ ಪಂಕಜ್ ಬೈಕ್ ನಲ್ಲಿ ವ್ಹೀಲಿಂಗ್ ಮಾಡುತ್ತಾ ಬಂದು ರಸ್ತೆ ಬದಿ ಕುಳಿತಿದ್ದ ಗುರುಸ್ವಾಮಿಗೆ ಡಿಕ್ಕಿ ಹೊಡೆದಿದ್ದಾರೆ. ಜಾನುವಾರುಗಳನ್ನು ಮೇಯಿಸಲು ಹೋಗಿದ್ದ ಗುರುಸ್ವಾಮಿ ಮತ್ತು ಗೋವಿಂದರಾಜು ರಸ್ತೆ ಬದಿ ಕುಳಿತಿದ್ದ ವೇಳೆ ಅತಿ ವೇಗವಾಗಿ ವ್ಹೀಲಿಂಗ್ ಮಾಡಿಕೊಂಡು ಬಂದು ಅವರ ಮೇಲೆ ಬೈಕ್ ಹರಿಸಿದ್ದಾರೆ.

ಗಾಯಗೊಂಡ ಗೋವಿಂದರಾಜು ಆಸ್ಪತ್ರೆಗೆ ದಾಖಲಾದರೆ ಗುರುಸ್ವಾಮಿ ಮೃತಪಟ್ಟಿದ್ದಾರೆ. ಸೈಯದ್ ಕೂಡ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read