ಅನುಕಂಪದ ಆಧಾರದ ಮೇಲೆ ಕೆಲಸ ಕೊಡುವಂತೆ ಒತ್ತಾಯ; ಬ್ಯಾಂಕ್ ಮುಂದೆ ಮಹಿಳೆ ಆತ್ಮಹತ್ಯೆ ಯತ್ನ

ಪತಿಯ ಮರಣಾನಂತರ ಅನುಕಂಪದ ಆಧಾರದ ಮೇಲೆ ಕೆಲಸ ನೀಡುವಂತೆ ಒತ್ತಾಯಿಸಿ ಮಹಿಳೆಯೊಬ್ಬರು ತಿರುವನಂತಪುರಂನಲ್ಲಿರುವ ಕೇರಳ ಬ್ಯಾಂಕ್‌ನ ಕಾಂಪೌಂಡ್ ಹತ್ತಿ ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಶ್ರೀರಂಜಿನಿ (38) ಎಂಬ ವಿಧವೆ ತಮ್ಮ ಉದ್ಯೋಗ ಮಂಜೂರಾತಿ ಕೋರಿಕೆಗೆ ಬ್ಯಾಂಕ್ ಅಧಿಕಾರಿಗಳು ಆಗಾಗ್ಗೆ ಕಿವಿಗೊಡದ ಕಾರಣ ಕಾಂಪೌಂಡ್ ಗೋಡೆಯಿಂದ ಸಮೀಪದ 30 ಅಡಿ ಆಳದ ಸ್ಮಶಾನಕ್ಕೆ ಜಿಗಿಯುವುದಾಗಿ ಬೆದರಿಕೆ ಹಾಕಿದರು.

ಜಿಲ್ಲಾ ಸಹಕಾರಿ ಬ್ಯಾಂಕ್‌ನ ಹಲವು ಶಾಖೆಗಳಲ್ಲಿ 14 ವರ್ಷಗಳಿಂದ ತಾತ್ಕಾಲಿಕ ಕಾವಲುಗಾರರಾಗಿ ಸೇವೆ ಸಲ್ಲಿಸಿದ್ದ ಶ್ರೀರಂಜಿನಿ ಅವರ ಪತಿ ಮೂರು ವರ್ಷಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದರು. ವರದಿಯ ಪ್ರಕಾರ ಶ್ರೀರಂಜಿನಿ ಬ್ಯಾಂಕ್‌ನಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆಗೆ ಆಗಾಗ್ಗೆ ಬ್ಯಾಂಕ್‌ಗೆ ಭೇಟಿ ನೀಡುತ್ತಿದ್ದರು.

ತಮ್ಮ ಮನವಿಗೆ ಬೆಲೆ ಸಿಗದ ಹಿನ್ನೆಲೆಯಲ್ಲಿ ಬೇಸತ್ತ ಶ್ರೀರಂಜಿನಿ ಬುಧವಾರ ತಮ್ಮ ಬೇಡಿಕೆಗಳನ್ನು ಮುಂದಿಟ್ಟರು ಮತ್ತು ಬ್ಯಾಂಕ್ ಅಧಿಕಾರಿಗಳು ಮಣಿಯದಿದ್ದಾಗ, ತನ್ನ ಇಬ್ಬರು ಮಕ್ಕಳನ್ನು ನೋಡಿಕೊಳ್ಳಲು ನನಗೆ ಬೇರೆ ಮಾರ್ಗವಿಲ್ಲ ಎಂದು ಹೇಳುವ ಮೂಲಕ ಕಾಂಪೌಂಡ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಲು ಪ್ರಾರಂಭಿಸಿದರು. ಬ್ಯಾಂಕ್‌ ನೌಕರರು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಸಿ ಅವರನ್ನು ಕೆಳಗಿಳಿಸಿದರು ಮತ್ತು ಆಕೆಯ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read