ಅಕ್ರಮ ಸಂಬಂಧಕ್ಕೆ ಅಡ್ಡಿ: ತಡರಾತ್ರಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಂದ ಪತ್ನಿ

ಕಲಬುರಗಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಭಾಗೋಡಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ತಿಪ್ಪಣ್ಣ ಕುಪೇಂದ್ರ(30) ಕೊಲೆಯಾದ ವ್ಯಕ್ತಿ. ಪತ್ನಿ ಶಾಂತಮ್ಮ ತಡರಾತ್ರಿ ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ತಿಪ್ಪಣ್ಣನ ಮುಖಕ್ಕೆ ದಿಂಬು ಒತ್ತಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಪತ್ನಿ ಮತ್ತು ಆಕೆಯ ಪ್ರಿಯಕರ ಮುಖಕ್ಕೆ ದಿಂಬು ಒತ್ತುತ್ತಿದ್ದಂತೆ ತಿಪ್ಪಣ್ಣ ಜೋರಾಗಿ ಕಿರುಚಾಡಿದ್ದಾರೆ.

ಕಿರುಚಾಟ ಕೇಳಿದ ಅಕ್ಕ-ಪಕ್ಕದವರು ಮನೆ ಬಾಗಿಲು ಬಡಿದಿದ್ದು, ಬಾಗಿಲು ತೆರೆಯದಿದ್ದಾಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಬರುತ್ತಿದ್ದಂತೆ ಪ್ರಿಯಕರ ಮನೆಯ ಅಟ್ಟದ ಮೇಲಿನ ಕಿಟಕಿಯಿಂದ ಪರಾರಿಯಾಗಿದ್ದಾನೆ. ಪೊಲೀಸರು ಶಾಂತಮ್ಮಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read