ಪತ್ನಿ ಹತ್ಯೆ ಮಾಡಿದವನಿಗೆ ಜೀವಾವಧಿ ಸಜೆ: ದಾಖಲೆಯ 60 ದಿನದೊಳಗೆ ತೀರ್ಪು

ಶಿವಮೊಗ್ಗ: ಪತ್ನಿ ಹತ್ಯೆ ಮಾಡಿದ ವ್ಯಕ್ತಿಗೆ ಭದ್ರಾವತಿಯ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಿ ಶನಿವಾರ ತೀರ್ಪು ನೀಡಿದೆ.

ಘಟನೆ ನಡೆದ 60 ದಿನದೊಳಗೆ ವಿಚಾರಣೆ ಪೂರ್ಣಗೊಳಿಸಿ ನ್ಯಾಯಾಧೀಶರು ತೀರ್ಪು ನೀಡಿ ದಾಖಲೆ ನಿರ್ಮಿಸಿದ್ದಾರೆ. ಭದ್ರಾವತಿ ತಾಲೂಕು ಹೊಳೆಹೊನ್ನೂರಿನ ಗಣೇಶ ಶಿಕ್ಷೆಗೆ ಗುರಿಯಾದ ವ್ಯಕ್ತಿಯಾಗಿದ್ದಾನೆ. ಮೇ 3ರಂದು ಕೌಟುಂಬಿಕ ಜಗಳದ ವೇಳೆ ಪತ್ನಿ ಗೀತಾ(40) ಅವರನ್ನು ಹತ್ಯೆ ಮಾಡಿದ್ದ.

ಮಾರಕಾಸ್ತ್ರದಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದ ಗಣೇಶನ ವಿರುದ್ಧ ಹೊಳೆಹೊನ್ನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಶಶಿಧರ ವಿಚಾರಣೆ ನಡೆಸಿ ಆರೋಪಿ ಗಣೇಶನಿಗೆ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕರಾದ ರತ್ನಮ್ಮ ವಾದ ಮಂಡಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read