ನಟ ದರ್ಶನ್ ಗೆ ಜೈಲೋ..ಬೇಲೋ..? : ನಾಳೆಗೆ ಜಾಮೀನು ಆದೇಶ ಕಾಯ್ದಿರಿಸಿದ ಹೈಕೋರ್ಟ್ |Actor Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಾಳೆಗೆ ಜಾಮೀನು ಆದೇಶ ಕಾಯ್ದಿರಿಸಿದೆ.

ಸುದೀರ್ಘ ವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ನಾಳೆಗೆ ಜಾಮೀನು ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದ್ದಾರೆ.

ಆರೋಗ್ಯದ ದೃಷ್ಟಿಯಿಂದ ನಟ ದರ್ಶನ್ ಗೆ ಜಾಮೀನು ನೀಡಬೇಕೆಂದು ವಕೀಲ ಸಿವಿ ನಾಗೇಶ್ ಮನವಿಮಾಡಿದ್ದಾರೆ. . ಡಿಸ್ಕ್ ನಲ್ಲಿನ ಸಮಸ್ಯೆಯಿಂದ ನರದಿಂದ ರಕ್ತಪರಿಚಲನೆ ಆಗುತ್ತಿಲ್ಲ … ಆದ್ದರಿಂದ ಶಸ್ತ್ರಚಿಕಿತ್ಸೆ ಅಗತ್ಯವಿದೆ. ಸಾಮಾನ್ಯ ಚಿಕಿತ್ಸೆಯಿಂದ ಇದಕ್ಕೆ ಪರಿಹಾರ ಸಿಗಲ್ಲ, ಅದಕ್ಕೆ ಶಸ್ತ್ರಚಿಕಿತ್ಸೆಯನ್ನೇ ಮಾಡಿಸಬೇಕು. ಈ ಹಿಂದೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾಗ ಆರೋಗ್ಯ ಸಮಸ್ಯೆ ಉಲ್ಲೇಖಿಸಿರಲಿಲ್ಲ. ಆದರೆ ಈಗ ಸಮಸ್ಯೆ ಉಲ್ಬಣ ಆಗಿರುವ ಕಾರಣ ಕೇಳುತ್ತಿದ್ದೇವೆ ಎಂದರು.

ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆ ನಟ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್, ದರ್ಶನ್ ಗೆ ಡಿಸ್ಕ್ ಸಮಸ್ಯೆಯಿದೆ. ತಕ್ಷಣ ಸರ್ಜರಿ ಅಗತ್ಯವಿದೆ. ಸರ್ಜರಿ ಮಾಡಿಸದಿದ್ದಲ್ಲಿ ದರ್ಶನ್ ಕಾಲಿಗೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ. ಹಾಗಾಗಿ ಜಾಮೀನು ಮಂಜೂರು ಮಾಡುವಂತೆ ಮನವಿ ಮಾಡಿದರು. ನಾಳೆ ದರ್ಶನ್ ಗೆ ಮಧ್ಯಂತರ ಜಾಮೀನು ಸಿಗುವ ನಿರೀಕ್ಷೆಯಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read