ಬೆಂಗಳೂರು : ಲಿಫ್ಟ್ನಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬಾಗಲೂರಿನ ಅಪಾರ್ಟ್ಮೆಂಟ್ವೊಂದರಲ್ಲಿ ನಡೆದಿತ್ತು .ಇದೀಗ ಪ್ರಕರಣ ಸಂಬಂಧ ಪುಷ್ಪಲತಾ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಅಕ್ಟೋಬರ್ 31 ರಂದು ಈ ಘಟನೆ ನಡೆದಿತ್ತು. ಲಿಫ್ಟ್ನಲ್ಲಿ ಮನೆ ಕೆಲಸದಾಕೆ ಪುಷ್ಪಲತಾ ಅಮಾನವೀಯ ಕೃತ್ಯ ಎಸಗಿದ್ದರು. ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಲಿಫ್ಟ್ ನಲ್ಲಿ ನಾಯಿ ಮರಿಯನ್ನು ಎತ್ತಿ ನೆಲಕ್ಕೆ ಬಡಿದು ಸಾಯಿಸಿ ವಿಕೃತಿ ಮೆರೆದಿದ್ದಳು.
ನಾಯಿ ನೋಡಿಕೊಳ್ಳಲೆಂದೇ ಪುಷ್ಪಾಲತಾಳನ್ನು ನೇಮಿಸಲಾಗಿತ್ತು. ನಾಯಿ ಸಾಯಿಸಿದ ಬಳಿಕ ಲಿಫ್ಟ್ ಹೊರಗೆ ಹೋಗಿ ಬಿತ್ತು ಎಂದು ಪುಷ್ಪಾಲತಾ ಕಥೆ ಕಟ್ಟಿದ್ದಳು. ಈ ಬಗ್ಗೆ ಶ್ವಾನದ ಮಾಲಕಿ ಸೆಕ್ಯೂರಿಟಿ ಬಳಿ ವಿಚಾರಿಸಿದಾಗ ಘಟನೆ ಬಯಲಾಗಿದೆ. ಅನುಮಾನ ಬಂದು ಸಿಸಿಟಿವಿ ಪರಿಶೀಲನೆ ಮಾಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಪುಷ್ಪಲತಾ ವಿರುದ್ಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
