ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹಿರೇಕೋಗಲೂರು ಗ್ರಾಮದ ಬಳಿ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಈರಗನಹಳ್ಳಿ ಗ್ರಾಮದ ನಿವಾಸಿ ನೇತ್ರಮ್ಮ(43) ಮೃತಪಟ್ಟವರು. ಮೆಕ್ಕೆಜೋಳ ತೆನೆ ಮುರಿಯುವ ಕೂಲಿ ಕೆಲಸಕ್ಕೆ ಹೋಗಿದ್ದ ನೇತ್ರಮ್ಮ ಅವರಿಗೆ ಶನಿವಾರ ಹಾವು ಕಚ್ಚಿದೆ. ಅವರನ್ನು ದಾವಣಗೆರೆಯ ಚಿಗಟೇರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗ ಅವರು ಮೃತಪಟ್ಟಿದ್ದಾರೆ. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
