ಹಾಸನ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಎಡವಟ್ಟು ಮಾಡಿದ್ದಾರೆ. ಎಡಗಾಲಿಗೆ ಶಸ್ತ್ರಚಿಕಿತ್ಸೆ ಮಾಡುವ ಬದಲು ಬಲಗಾಲು ಕೊಯ್ದು ಹಾಕಿದ್ದಾರೆ.
ಜ್ಯೋತಿ ಎನ್ನುವವರ ಎಡಗಾಲಿಗೆ ರಾಡ್ ಅಳವಡಿಸಲಾಗಿತ್ತು. ಅಪಘಾತ ಹಿನ್ನೆಲೆಯಲ್ಲಿ ಎರಡೂವರೆ ವರ್ಷದ ಹಿಂದೆ ಎಡಗಾಲಿಗೆ ರಾಡ್ ಅಳವಡಿಸಲಾಗಿದ್ದು. ಮತ್ತೆ ಕಾಲು ನೋವು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ಆಸ್ಪತ್ರೆಯ ವೈದ್ಯ ಡಾ. ಸಂತೋಷ್ ಎಡಗಾಲಿನ ಬದಲಿಗೆ ಬಲಗಾಲಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
ವೈದ್ಯ ಸಂತೋಷ್ ಮಹಿಳೆ ಜ್ಯೋತಿ ಅವರ ಎಡಗಾಲಿನಲ್ಲಿದ್ದ ರಾಡ್ ತೆಗೆಯಲು ಹೋಗಿ ಬಲಗಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದು, ವೈದ್ಯರ ಎಡವಟ್ಟಿಗೆ ಮಹಿಳೆ ಜ್ಯೋತಿ ಆಘಾತಕ್ಕೆ ಒಳಗಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಬೂಚನಹಳ್ಳಿಯ ಕಾವಲು ಗ್ರಾಮದ ನಿವಾಸಿಯಾಗಿರುವ ಜ್ಯೋತಿ ಎರಡೂವರೆ ವರ್ಷದ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದರು. ತೀವ್ರ ಪೆಟ್ಟಾಗಿದ್ದರಿಂದ ಎಡಗಾಲಿಗೆ ವೈದ್ಯರು ಅಳವಡಿಸಿದ್ದರು. ಈಗ ಹಿಮ್ಸ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಸಂತೋಷ್ ಬಳಿ ತೋರಿಸಿದ್ದರು. ಆದರೆ ಅವರು ಬೇರೆ ಕಾಲು ಕೊಯ್ದು ಹಾಕಿದ್ದು, ಇದರಿಂದಾಗಿ ಜ್ಯೋತಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.