ಕೆಲಸದ ವೇಳೆಯಲ್ಲೇ ಕಾರ್ಮಿಕ ಸಾವು, ಆಸ್ಪತ್ರೆಯಲ್ಲೇ ಶವ ಬಿಟ್ಟು ಬಂದ ಕಾರ್ಖಾನೆ ಸಿಬ್ಬಂದಿ; ಸಂಬಂಧಿಕರ ಪ್ರತಿಭಟನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಸಮೀಪದ ರೇಣುಕಾ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ.

ಮುನವಳ್ಳಿ ಗ್ರಾಮದ ಮಾಂತಯ್ಯ ಅಥಣಿಮಠ(40) ಮೃತಪಟ್ಟವರು ಎಂದು ಹೇಳಲಾಗಿದೆ. ಕಾರ್ಖಾನೆಯಲ್ಲಿ ಮಷೀನ್ ಗಳ ಮೆಂಟೆನೆನ್ಸ್ ಮಾಡುತ್ತಿದ್ದ ಮಾಂತಯ್ಯ ಕೆಲಸ ಮಾಡುವಾಗ ಹೊಟ್ಟೆ ಬಳಿ ಮಷೀನ್ ಬ್ಲೇಡ್ ತಾಗಿ ರಕ್ತಸ್ರಾವ ಆಗಿದೆ.

ಸ್ಥಳೀಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಕಾರ್ಮಿಕ ಮಾಂತಯ್ಯ ಸಾವನ್ನಪ್ಪಿದ್ದಾರೆ. ಶವವನ್ನು ಖಾಸಗಿ ಆಸ್ಪತ್ರೆಯಲ್ಲಿಯೇ ಕಾರ್ಖಾನೆಯ ಸಿಬ್ಬಂದಿ ಬಿಟ್ಟು ಬಂದಿದ್ದಾರೆ.

ಖಾಸಗಿ ಆಂಬುಲೆನ್ಸ್ ನಲ್ಲಿ ಶವ ತಂದು ಕಾರ್ಖಾನೆ ಎದುರು ಪ್ರತಿಭಟನೆ ನಡೆಸಲಾಗಿದೆ. ಸೂಕ್ತ ಪರಿಹಾರ ನೀಡುವಂತೆ ಕುಟುಂಬದವರು, ರೈತರು ಪ್ರತಿಭಟನೆ ನಡೆಸಿದ್ದಾರೆ. ಕೆಲಸಗಾರ ಮೃತಪಟ್ಟರೂ ಸಕ್ಕರೆ ಕಾರ್ಖಾನೆ ಅಧಿಕಾರಿಗಳು ಸ್ಪಂದಿಸಿಲ್ಲ. ಪೊಲೀಸರ ಮೂಲಕ ಎಲ್ಲರನ್ನು ಹೊರ ಕಳುಹಿಸಲು ಯತ್ನಿಸಲಾಗಿದೆ. ಯಾವುದೇ ಕಾರಣಕ್ಕೂ ಶವ ತೆಗೆದುಕೊಂಡು ಹೋಗುವುದಿಲ್ಲವೆಂದು ಪಟ್ಟುಹಿಡಿದಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read