BREAKING NEWS: ಮಡಿಕೇರಿಯಲ್ಲಿ ಘೋರ ದುರಂತ; ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಸಾವು

ಮಡಿಕೇರಿ: ಮಡಿಕೇರಿಯಲ್ಲಿ ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಮೂಲದ ಕಾರ್ಮಿಕರಾದ ಬಸವ, ಲಿಂಗಪ್ಪ, ಆನಂದ ಮೃತಪಟ್ಟವರು ಎಂದು ಹೇಳಲಾಗಿದೆ.

ಮಡಿಕೇರಿ ರೆಡ್ ಕ್ರಾಸ್ ಸಭಾಂಗಣ ಸಮೀಪ ಮಣ್ಣಿನ ದಿಬ್ಬ ಕುಸಿದು ಮಣ್ಣಿನಲ್ಲಿ ಐವರು ಸಿಲುಕಿದ್ದಾರೆ. ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಅವರನ್ನು ಕೂಡ ರಕ್ಷಿಸಿ ಆಸ್ಪತ್ರೆಗೆ ಕರೆತರಲಾಗಿದ್ದು, ಈ ವೇಳೆಗಾಗಲೇ ಮೃತಪಟ್ಟಿದ್ದರೆನ್ನಲಾಗಿದೆ.

ಘಟನಾ ಸ್ಥಳಕ್ಕೆ ಎಸ್ಪಿ ರಾಮರಾಜನ್, ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read