‘ಸಾಯುತ್ತೇನೆ ಹೊರತೂ ದೆಹಲಿಗೆ ಹೋಗಲ್ಲ’: ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮರು ದಿನವೇ ಶಿವರಾಜ್ ಸಿಂಗ್ ಚೌಹಾಣ್ ಸ್ಪೋಟಕ ಹೇಳಿಕೆ

ಭೋಪಾಲ್: ಭಾರತೀಯ ಜನತಾ ಪಕ್ಷದ ಹೊಸ ಸಿಎಂ ಆಯ್ಕೆಯಾಗಿರುವ ಮೋಹನ್ ಯಾದವ್‌ ಗೆ ದಾರಿ ಮಾಡಿಕೊಡಲು ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಒಂದು ದಿನದ ನಂತರ, ಶಿವರಾಜ್ ಚೌಹಾಣ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ.

ಯಾವುದೇ ಹೊಸ ಪಾತ್ರಕ್ಕಾಗಿ ದೆಹಲಿಗೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಹಳೆಯ ನಾಯಕತ್ವ ಬದಲಾವಣೆ ಮಾಡಿದ್ದರಿಂದ ಮಧ್ಯಪ್ರದೇಶ ರಾಜಕೀಯದಲ್ಲಿ ಪಕ್ಷದ ವರಿಷ್ಠ ಶಿವರಾಜ್ ಚೌಹಾಣ್ ಅವರ ಭವಿಷ್ಯದ ಪಾತ್ರದ ಬಗ್ಗೆ ಪ್ರಶ್ನೆಗಳು ಮುಂಚೂಣಿಯಲ್ಲಿವೆ. ಮೋದಿ ಸರ್ಕಾರದಲ್ಲಿ ದೊಡ್ಡ ಪಾತ್ರಕ್ಕಾಗಿ ಕೇಂದ್ರ ನಾಯಕತ್ವವು ಚೌಹಾಣ್ ಅವರನ್ನು ದೆಹಲಿಗೆ ಕರೆತರುತ್ತದೆ ಎಂದು ಹೇಳಲಾಗಿತ್ತು. ಇಂತಹ ಊಹಾಪೋಹಗಳಿಗೆ ತೆರೆ ಎಳೆದ ಚೌಹಾಣ್, ಸಾಯುತ್ತೇನೆ ಹೊರತೂ ದೆಹಲಿಗೆ ಹೋಗುವುದಿಲ್ಲ ಎಂದು ರಾಜಕೀಯ ಭವಿಷ್ಯದ ಊಹಾಪೋಹಗಳ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಬಿಜೆಪಿಯು ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದಕ್ಕಿಂತ ಸಂತೋಷ ಏನಿದೆ. 2023 ರಲ್ಲಿ ಮತ್ತೊಮ್ಮೆ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಸರ್ಕಾರವನ್ನು ರಚಿಸಿದೆ ಎಂಬ ತೃಪ್ತಿ ಇದೆ. ನನ್ನ ಹೃದಯವು ಸಂತೋಷ ಮತ್ತು ತೃಪ್ತಿಯಿಂದ ತುಂಬಿದೆ ಎಂದು ಚೌಹಾಣ್ ಹೇಳಿದ್ದಾರೆ.

https://twitter.com/ANI/status/1734493291528282160

https://twitter.com/ANI/status/1734483971860488224

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read