BREAKING: ಯಾದಗಿರಿಯಲ್ಲಿ ಕಾಟನ್ ಮಿಲ್ ನಲ್ಲಿ ಭೀಕರ ಬೆಂಕಿ ಅವಘಡ; ಕೋಟ್ಯಂತರ ಮೌಲ್ಯದ ಹತ್ತಿ, ಯಂತ್ರೋಪಕರಣಗಳು ಸುಟ್ಟು ಭಸ್ಮ

ಯಾದಗಿರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಾಟನ್ ಮಿಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುಲಕಲ್ ಬಳಿ ನಡೆದಿದೆ.

ಶೀಮಣಿಕಂಠ ಕಾಟನ್ ಜಿನ್ನಿಂಗ್ ಇಂಡಸ್ಟ್ರೀಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಅವಘಡದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಹತ್ತಿ ಸುಟ್ಟು ಭಸ್ಮವಾಗಿದೆ.

ಗುರು ಮಣಿಕಂಠ ಎಂಬುವವರಿಗೆ ಸೇರಿದ ಕಾಟನ್ ಮಿಲ್ ಇದಾಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ. 15 ಕೋಟಿ ಮೌಲ್ಯದ ಯಂತ್ರ, ಹತ್ತಿ ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read