ದೂರು ಸ್ವೀಕರಿಸದ ಪೊಲೀಸರು, ಯುವಕನಿಂದ ಕೊಲೆ ಬೆದರಿಕೆ

ಯಾದಗಿರಿ: ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಿದ ಕಾರಣ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನ ಎದುರಾಳಿಗಳನ್ನು ಮಾರಕಾಸ್ತ್ರದಿಂದ ಕೊಲೆ ಮಾಡುವುದಾಗಿ ಎಕ್ಸ್ ನಲ್ಲಿ ಪೋಸ್ಟ್ ಹಾಕಿದ್ದು, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಟ್ಯಾಗ್ ಮಾಡಿದ್ದಾನೆ.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ಘಟನೆ ನಡೆದಿದೆ. ಬರದೇವನಾಳ ಗ್ರಾಮದ ಶರೀಫ್ ಎಂಬಾತ ಕೊಲೆ ಬೆದರಿಕೆ ಪೋಸ್ಟ್ ಹಾಕಿದ್ದಾನೆ. ತಮ್ಮ ಗ್ರಾಮದಲ್ಲಿ ಮನೆ ಕಟ್ಟಿಸುತ್ತಿರುವುದಕ್ಕೆ ಕೆಲವರು ಅಡ್ಡಿಪಡಿಸುತ್ತಿರುವುದಾಗಿ ಆರೋಪಿಸಿದ್ದಾನೆ.

ಎಲ್ಲ ದಾಖಲೆಗಳು ಸರಿಯಾಗಿದ್ದರೂ ಕೆಲವರು ಅಡ್ಡಿಪಡಿಸುತ್ತಿದ್ದಾರೆ. ಒಂದು ತಿಂಗಳಿನಿಂದ ನಮ್ಮ ತಂದೆ ಪೊಲೀಸ್ ಠಾಣೆಗೆ ಅಲೆದರೂ ಪೊಲೀಸರು ದೂರು ಸ್ವೀಕರಿಸಿಲ್ಲ. ಯಾರೂ ಕೂಡ ಸ್ಪಂದಿಸುತ್ತಿಲ್ಲ. ಸುರಪುರ ಶಾಸಕರ ಪಿಎ ಪೊಲೀಸರಿಗೆ ಕರೆ ಮಾಡಿ ಹೇಳಿದ್ದಕ್ಕೆ ದೂರು ಪಡೆಯುತ್ತಿಲ್ಲ. ಒಂದು ವೇಳೆ ದೂರು ಪಡೆಯದಿದ್ದರೆ ಈ ತಲ್ವಾರ್ ನಿಂದ ಕೊಲೆ ಮಾಡುತ್ತೇನೆ ಎಂದು ಶರೀಫ್ ಪೋಸ್ಟ್ ಮಾಡಿದ್ದು, ಕತ್ತಿಯ ಫೋಟೋವನ್ನು ಕೂಡ ಪೋಸ್ಟ್ ಮಾಡಿ ಪೊಲೀಸ್ ಮಹಾ ನಿರ್ದೇಶಕರಿಗೆ ಟ್ಯಾಗ್ ಮಾಡಿದ್ದಾನೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read