ಬಿಜೆಪಿ ಶಾಸಕಾಂಗ ಸಭೆಗೆ ಮುನ್ನವೇ ಅಸಮಾಧಾನ ಸ್ಪೋಟ

ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆಗೂ ಮುನ್ನವೇ ಅಸಮಾಧಾನ ಸ್ಪೋಟಗೊಂಡಿದೆ. ಇದು ಬಡವರು ಚಹಾ ಕುಡಿಯುವ ಜಾಗ ಅಲ್ಲವೆಂದು ಹೇಳಿದ ಬಿಜೆಪಿ ಶಾಸಕ ಯತ್ನಾಳ್, ಚಹಾ ಕುಡಿಯಲು ಹೊರಗಡೆ ಹೋಗುತ್ತಿದ್ದೇನೆ ಎಂದು ಬಿಜೆಪಿ ಶಾಸಕಾಂಗ ಸಭೆ ಬಹಿಷ್ಕರಿಸಿ ಹೊರ ನಡೆದಿದ್ದಾರೆ.

ಯತ್ನಾಳ್ ಅವರೊಂದಿಗೆ ಕಾರ್ ನಲ್ಲಿ ಶಾಸಕ ರಮೇಶ ಜಾರಕಿಹೊಳಿ ಕೂಡ ತೆರಳಿದ್ದಾರೆ. ಶಾಸಕಾಂಗ ಪಕ್ಷದ ಸಭೆಗೆ ಮೊದಲು ಹೈಕಮಾಂಡ್ ವೀಕ್ಷಕರು ಪ್ರಮುಖರೊಂದಿಗೆ ಸಭೆ ನಡೆಸಿದ್ದು, ವರಿಷ್ಠರ ನಿರ್ಧಾರದ ಬಗ್ಗೆ ಆಕಾಂಕ್ಷಿಗಳ ಗಮನಕ್ಕೆ ತಂದಿದ್ದಾರೆ. ಆರ್. ಅಶೋಕ್ ನೇಮಕದ ಕುರಿತು ಸಭೆಯಲ್ಲಿ ವೀಕ್ಷಕರು ತಿಳಿಸಿದ್ದು, ಇದನ್ನು ಒಪ್ಪದೇ ಯತ್ನಾಳ್ ಮತ್ತು ಜಾರಕಿಹೊಳಿ ಸಭೆಯಿಂದ ಹೊರ ನಡೆದಿದ್ದಾರೆ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read