ಯತ್ನಾಳ್ ಗೆ ಮಹಿಳೆಯರ ಬಗ್ಗೆ ಗೌರವವಿಲ್ಲ ಎಂಬುದು ಅವರ ಮಾತಿನಿಂದಲೇ ಗೊತ್ತಾಗುತ್ತಿದೆ: ಸಚಿವ ತಂಗಡಗಿ ಕಿಡಿ

ಕೊಪ್ಪಳ: ಮುಸ್ಲಿಂ ಸಮಾಜದ ಯುವತಿಯರನ್ನು ಪ್ರೀತಿಸಿ ಮದುವೆಯಾದರೆ ೫ ಲಕ್ಷ ಹಣ ಕೊಡುತ್ತೇನೆ ಎಂದು ಘೋಷಿಸಿರುವ ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆಯನ್ನು ಸಚಿವ ಶಿವರಾಜ್ ತಂಗಡಗಿ ತೀವ್ರವಾಗಿ ಖಂಡಿಸಿದ್ದಾರೆ.

ಕ್ಪ್ಪಳದಲ್ಲಿ ಮಾತನಾಡಿದ ಸಚಿವ ತಂಗಡಗಿ, ಯತ್ನಾಳ್ ಗೆ ಮಹಿಳೆಯ ಬಗ್ಗೆ ಗೌರವವಿಲ್ಲ ಎಂಬುದು ಅವರ ಮಾತಿಂದಲೇ ಗೊತ್ತಾಗುತ್ತಿದೆ. ಅದ್ಯಾವ ನೈತಿಕತೆಯಿಂದ ಅವರು ಈ ರೀತಿ ಹೇಳಿಕೆ ಕೊಡುತ್ತಾರೆ? ಎಂದು ಪ್ರಶ್ನಿಸಿದರು.

ದುಡ್ಡು ಇವರ ಬಳಿ ಮಾತ್ರ ಇದೆ ಅಂದುಕೊಂಡಿದ್ದಾರಾ? ಬೇರೆ ಜಾತಿ ಧರ್ಮದ ಹೆಣ್ಣುಮಕ್ಕಳ ವಿಷಯದಲ್ಲಿ ಕೀಳಾಗಿ ಮಾತನಾಡುವುದು ದೇಶ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಒಪ್ಪುವುದಿಲ್ಲ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read