ಕರಾವಳಿಯಲ್ಲಿ ಇನ್ನೂ ಒಂದು ವಾರ ಮಳೆ ಆರ್ಭಟ: ಇಂದಿನಿಂದ ಆರೆಂಜ್ ಅಲರ್ಟ್

ಬೆಂಗಳೂರು: ಕರಾವಳಿ ಪ್ರದೇಶದಲ್ಲಿ ಮಳೆಯ ಆರ್ಭಟ ಇನ್ನೂ ಒಂದು ವಾರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಜುಲೈ 5 ರಿಂದ 8 ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಜುಲೈ 9ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದೇ ಅವಧಿಯಲ್ಲಿ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.

ಜುಲೈ 5ರಂದು ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read