ಕಿರಿಯ ವಕೀಲೆಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ: ವಕೀಲನ ಸನ್ನದು ಅಮಾನತು

ಬೆಂಗಳೂರು: ಕಿರಿಯ ವಕೀಲಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ವಕೀಲ ಹೆಚ್. ಮಂಜುನಾಥ್(46) ಅವರ ಸನ್ನದು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.

ಕರ್ನಾಟಕ ವಕೀಲರ ಪರಿಷತ್ ಮಂಜುನಾಥ್ ಅವರ ಸನ್ನದು ತಾತ್ಕಾಲಿಕವಾಗಿ ಅಮಾನತು ಪಡಿಸಿ ಆದೇಶಿಸಿದೆ. ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳಾ ವಕೀಲೆ ದೂರು ಸಲ್ಲಿಸಿದ್ದು, ಇದನ್ನು ಆಧರಿಸಿ ಪರಿಶೀಲನೆ ನಡೆಸಿ ಶಿಸ್ತು ಪ್ರಾಧಿಕಾರದ ಸಭೆಯಲ್ಲಿ ಚರ್ಚೆ ನಡೆಸಿದ ನಂತರ ಕರ್ನಾಟಕ ವಕೀಲರ ಪರಿಷತ್ ಇತ್ತೀಚೆಗೆ ಈ ಆದೇಶ ಹೊರಡಿಸಿದೆ.

ಪ್ರಕರಣವನ್ನು ಪರಿಷತ್ ನ ಶಿಸ್ತು ಸಮಿತಿಗೆ ವಹಿಸಲಾಗಿದ್ದು, ವಿಚಾರಣೆ ಪೂರ್ಣಗೊಳ್ಳುವವರೆಗೆ ವಕೀಲ ಹೆಚ್. ಮಂಜುನಾಥ್ ಅವರ ಸನ್ನದು ಅಮಾನತು ಮಾಡಲಾಗಿದೆ ಎಂದು ಪರಿಷತ್ ಅಧ್ಯಕ್ಷ ಹೆಚ್.ಎಲ್. ವಿಶಾಲ್ ರಘು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read