ಬೆಂಗಳೂರಿಗೆ ಬರುತ್ತಿದ್ದ ವಿಮಾನದ ತುರ್ತು ದ್ವಾರ ತೆರೆಯಲು ಯತ್ನಿಸಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಾರ್ಗ ಮಧ್ಯೆ ವಿಮಾನದ ತುರ್ತು ದ್ವಾರ ತೆರೆಯಲು ಪ್ರಯತ್ನಿಸಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲೀಸರು ಯುವಕನನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ರಾಜಮಂಡ್ರಿ ಮೂಲದ ವೆಂಕಟ್ ಮೋಹಿತ್(29) ಬಂಧಿತ ಆರೋಪಿ. ಜುಲೈ 15ರಂದು ಪ್ಯಾರಿಸ್ ನಿಂದ ಏರ್ ಫ್ರಾನ್ಸ್ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವೆಂಕಟ್ ವಿಮಾನ ಬೆಂಗಳೂರು ತಲುಪಲು 4 ಗಂಟೆ ಇರುವಾಗಲೇ ಏಕಾಏಕಿ ಹಿಂಬದಿಯ ಎಡ ಭಾಗದ ದ್ವಾರ ತೆರೆಯಲು ಪ್ರಯತ್ನಿಸಿದ್ದಾನೆ. ಇದರಿಂದಾಗಿ ಸಹ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ.

ವಿಮಾನದ ಸಿಬ್ಬಂದಿ ವರದಿ ನೀಡಿದ್ದು, ಏರ್ ಫ್ರೆಂಡ್ಸ್ ಇಂಡಿಯಾ ಡ್ಯೂಟಿ ಮ್ಯಾನೇಜರ್ ಶೀಬಾ ಸ್ವಾಮಿನಾಥನ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ವೆಂಕಟ್ ನನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read