ಬೆಂಗಳೂರು: 19 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ.
ಹಾಸನ ಮೂಲದ ನಿಶಾಂತ್ ಮೃತ ಯುವಕ. ಹಾಸನ ಜಿಲ್ಲೆಯ ಹೊಳೆನರಸೀಪುರದ ನಿವಾಸಿಯಾಗಿರುವ ನಿಶಾಂತ್, ಕೈಗಾರಿಕಾ ತರಬೇತಿಗಾಗಿ ಬೆಂಗಳೂರಿಗೆ ಬಂದು ರೂಮ್ ನಲ್ಲಿದ್ದ. ಈ ವೇಳೆ ಹಠಾತ್ ಹೃದಯಾಘಾತ ಸಂಭವಿಸಿ ರೂಮ್ ನಲ್ಲಿಯೇ ಯುವಕ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.