SHOCKING: ಜಗಳ ಬಿಡಿಸಲು ಹೋದ ಯುವಕನ ಎದೆಗೆ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಬರ್ಬರ ಹತ್ಯೆ

ಬೆಳಗಾವಿ: ಜಗಳ ಬಿಡಿಸಲು ಹೋದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ಯಳ್ಳೂರು ರಸ್ತೆಯಲ್ಲಿ ನಡೆದಿದೆ.

ಸ್ಕ್ರೂ ಡ್ರೈವರ್ ನಿಂದ ಎದೆಗೆ ಚುಚ್ಚಿ ಪ್ರತೀಕ್ ಲೋಹಾರ್(21) ಹತ್ಯೆ ಮಾಡಲಾಗಿದೆ. ಕೊಲೆಯಾದ ಪ್ರತೀಕ್ ಮಜಗಾಂವ್ ಗ್ರಾಮದ ನಿವಾಸಿಯಾಗಿದ್ದಾನೆ. ತನ್ನ ಸ್ನೇಹಿತನ ಜೊತೆ ಕೆಲ ಯುವಕರು ಜಗಳವಾಡುವಾಗ ಬಿಡಿಸಲು ಹೋಗಿದ್ದ ವೇಳೆ ದುಷ್ಕರ್ಮಿಗಳು ಎದೆಗೆ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿದ್ದಾರೆ.

ಜಗಳ ಬಿಡಿಸುವಾಗ ಬೈಕ್ ನಲ್ಲಿದ್ದ ಸ್ಕ್ರೂಡ್ರೈವರ್ ತೆಗೆದುಕೊಂಡು ಎದೆಗೆ ಚುಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಹಿಂದೆಯೂ ಇದೇ ಗ್ಯಾಂಗ್ ಪ್ರತೀಕ್ ಜೊತೆಗೆ ಜಗಳವಾಡಿತ್ತು ಎನ್ನಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read