ಈ ಆಕ್ಸಿಡೆಂಟ್ ನೋಡಿದ್ರೆ ನೀವು ನಿಜಕ್ಕೂ ಶಾಕ್ ಆಗ್ತೀರಾ..! ಕೂದಲೆಳೆ ಅಂತರದಲ್ಲಿ ಯುವಕ ಪ್ರಾಣಾಪಾಯದಿಂದ ಪಾರು

ತುಮಕೂರು ಜಿಲ್ಲೆಯಲ್ಲಿ ಅಪಘಾತವೊಂದು ನಡೆದಿದೆ. ಈ ಅಪಘಾತ ನಿಜಕ್ಕೂ ಬೆಚ್ಚಿ ಬೀಳಿಸುವಂತಿದೆ. ಅದೃಷ್ಟವಶಾತ್ ಆ ಯುವಕ ಬದುಕುಳಿದಿದ್ದಾನೆ. ಈ ಭೀಕರ ಅಪಘಾತ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಹೌದು, ಕುಣಿಗಲ್ ತಾಲೂಕಿನ ಅಂಚೆಪಾಳ್ಯದ ಹೋಟೆಲ್ ಮುಂಭಾಗ ಈ ಘಟನೆ ನಡೆದಿದೆ. ಮನು ಎಂಬಾತ ಕೆಲಸದ ಹಿನ್ನೆಲೆ ಈ ಹೋಟೆಲ್ ಮುಂಭಾಗದ ರಸ್ತೆ ಮುಂದೆ ಬೈಕ್ ಮೇಲೆ ಕುಳಿತಿದ್ದಾನೆ. ಈ ವೇಳೆ ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ಒಂದು ವೇಗವಾಗಿ ಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆಯ ಎಡ ಬದಿಗೆ ಅತಿ ವೇಗವಾಗಿ ನುಗ್ಗಿದೆ. ಇದನ್ನು ಗಮನಿಸಿದ ಯುವಕ ಕ್ಷಣಾರ್ಧದಲ್ಲಿ ಬೈಕ್ ಬಿಟ್ಟು ಓಡಿ ಹೋಗಿದ್ದಾನೆ.

ಇನ್ನು ಕ್ಯಾಂಟರ್ ಗುದ್ದಿದ ಪರಿಣಾಮ ಬೈಕ್ ಸಂಪೂರ್ಣ ಜಖಂಗೊಂಡಿದೆ. ಯುವಕ ತಕ್ಷಣ ಎಚ್ಚೆತ್ತುಕೊಂಡಿದ್ದಕ್ಕೆ ಆತನ ಪ್ರಾಣ ಕೂದಲೆಳೆ ಅಂತರದಲ್ಲಿ ಪ್ರಾಣ ಉಳಿದಿದೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಆತ ಬದುಕುಳಿದಿದ್ದೇ ಒಂದು ದೊಡ್ಡ ಪವಾಡ ಅಂತಿದ್ದಾರೆ ನೋಡಿದವರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read