ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಯುವಕ ಸಾವು

ಬೆಂಗಳೂರು: ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಜಾರ್ಖಂಡ್ ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಚಿಕ್ಕಹೊಸಹಳ್ಳಿಯಲ್ಲಿ ನಡೆದಿದೆ.

ವಸತಿ ಸಮುಚ್ಚಯ ನಿರ್ಮಾಣ ಕೆಲಸ ಮಾಡುತ್ತಿದ್ದ ರಿತೀಶ್(18) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಕುಡಿದ ಮತ್ತಿನಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಪ್ರೇಮ ವೈಫಲ್ಯದಿಂದ ರಿತೇಶ್ ಬೇಸತ್ತು ಕುಡಿತದ ಚಟಕ್ಕೆ ಬಿದ್ದಿದ್ದ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ರಿತೇಶ್ ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read